ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.