ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು.