ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.