kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ತೀತನಿಗೆ

,

1ನೇ ಅಧ್ಯಾಯ

,
???en_US.statement???   2

ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.

Go to Home Page