ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.