ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;