ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.