ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.
Go to Home Page