ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.