ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.
Go to Home Page