ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.