ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.