ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.
Go to Home Page