ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.