ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.