“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು.