ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.