ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.