ದಾವೀದನು, “ನಾಹಾಷನು ನನಗೆ ಸ್ನೇಹತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.