ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.