ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.