ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.