ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.