ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.