ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.