ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.