ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.
Go to Home Page