ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು.