ಲೇವಿಯರು, ಚರ್ಮ ಸುಲಿದು ಹೋಮಕ್ಕಾಗಿ ತೆಗೆದಿಟ್ಟಿದ್ದನ್ನು ಪ್ರತ್ಯೇಕಿಸಿ, ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರ, ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಸರ್ವೇಶ್ವರನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲೂ ಅದೇ ಕ್ರಮವನ್ನು ಅನುಸರಿಸಿದರು.