ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು: