ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.