ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.