ಸರ್ವೇಶ್ವರ ಮತ್ತೆ ನನಗೆ ಹೀಗೆಂದರು : “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ.