ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”