“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.