ಸಿಯೋನ್ ನಗರಿಯ ಕೋಟೆಯನ್ನು ನಾಶಪಡಿಸಲೆಂದು ಎಳೆದಿರುವನಲ್ಲಾ ಸರ್ವೇಶ್ವರ ಅಳತೆನೂಲನ್ನು ! ಹಾಳುಮಾಡುವ ತನ್ನ ಕೈಯನ್ನು ಹಿಂದೆಗೆಯದೆ ಬಿರುಕುಗೊಳಿಸಿದ್ದಾನೆ ಪೌಳಿಗೋಡೆಯನ್ನೇ, ಕೋಟೆಯನ್ನೇ, ಅವುಗಳೆರಡೂ, ಕುಸಿದು ಬಿದ್ದುಹೋಗಿವೆ.