ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.