ಆದುದರಿಂದ ಆ ನಾಯಕನು ದಾನಿಯೇಲನಿಗೆ, “ನಿಮಗೆ ಅನ್ನಪಾನಗಳನ್ನು ಏರ್ಪಡಿಸಿದ ನನ್ನೊಡೆಯನಾದ ರಾಜನು ನಿಮ್ಮಂತೆ ಆಯ್ಕೆಯಾದ ಯುವಕರ ಮುಖಕ್ಕಿಂತ ನಿಮ್ಮ ಮುಖ ಬಾಡಿರುವುದನ್ನು ನೋಡಿ ನನ್ನ ತಲೆ ತೆಗೆಸಬಹುದೆಂಬ ಭಯ ನನಗಿದೆ. ಇದಕ್ಕೆ ನೀವು ಕಾರಣರಾಗಬಹುದಲ್ಲವೆ?” ಎಂದು ಹೇಳಿದನು.