ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.
Go to Home Page