ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.